ದೇವಸ್ಥಾನಗಳ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಗಳನ್ನು ಅರ್ಥಮಾಡಿಕೊಂಡು, ತಳಮಟ್ಟದಲ್ಲಿ ಇರುವ ಮೌಲ್ಯಗಳನ್ನು ಗುರುತಿಸಿ ಭಾರತದ ಪರಿಕಲ್ಪನೆಯನ್ನು ಗ್ರಹಿಸಬೇಕಾಗಿದೆ. ವಸಾಹತುಶಾಹಿಪ್ರಭಾವದ ಆಧಾರದಲ್ಲಿಯೋಚನೆ ಮಾಡುವ ಚಿಂತಕರಿಗೆ ದೇಶದ ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭೂಭಾಗಗಳ ಸಂಪ್ರದಾಯ, ಸಂಸ್ಕೃತಿಗಳನ್ನು ಅರ್ಥ ಮಾಡಿಕೊಳ್ಳುವುದು ಸಾಧ್ಯವಾಗುವುದಿಲ್ಲ.ಆಯಾ ಭೂ ಪ್ರದೇಶಗಳ ಸಾಂಸ್ಕೃತಿಕ ಹಿನ್ನೆಲೆಯನ್ನು ಗ್ರಹಿಸುವ ಮೂಲಕಭಾರತದ ಕಲ್ಪನೆಯನ್ನು ಅರ್ಥಮಾಡಿಕೊಳ್ಳಬೇಕು ಎಂದರು.