ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಶುಕ್ರವಾರ ಮಂಗಳೂರು ನಗರಕ್ಕೆ ತೆರಳಲು ಮುಂದಾಗಿದ್ದರು. ಆದರೆ, ಅವರನ್ನುಮಂಗಳೂರು ವಿಮಾನನಿಲ್ದಾಣದಲ್ಲಿಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸಿದ್ದರಾಮಯ್ಯ ಸಹ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ತೆರಳಲು ಶುಕ್ರವಾರ ಅಣಿಯಾಗಿದ್ದರು. ಆದರೆ,ಮಂಗಳೂರಿನಲ್ಲಿ ವಿಮಾನ ಇಳಿಸಲು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರವಾಸ ರದ್ದುಪಡಿಸಿದ್ದರು.