‘1,500ರಿಂದ 2,000 ಮುಸ್ಲಿಂ ಯುವಕರಿದ್ದ ಗುಂಪು ಪ್ರತಿಭಟನೆ ನಿರತವಾಗಿತ್ತು. ಜಲ್ಲಿಕಲ್ಲು, ದೊಣ್ಣೆ, ಸೋಡಾ ಬಾಟಲಿ, ಗಾಜಿನ ತುಂಡುಗಳೊಂದಿಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಬೆಂಕಿಹಚ್ಚಿ, ಪೊಲೀಸರನ್ನು ಕೊಲ್ಲಲು ಯತ್ನಿಸಿತು. ಠಾಣೆಯ ಮೇಲೆ ಕಲ್ಲು ತೂರಾಟ ಮಾಡಿ, ಟಯರ್ ಬೆಂಕಿ ಹಚ್ಚಿ ಎಸೆಯುತ್ತಿದ್ದರು. ಮೆಗಾ ಫೋನ್ ಮೂಲಕ ಸೂಚನೆ ನೀಡಿದರೂ ಚದುರಲಿಲ್ಲ. ಲಾಠಿ ಪ್ರಹಾರ ಮಾಡಿದಾಗ ಚದುರಿ ಹೋದ ಗುಂಪು ಮತ್ತೆ ಸೇರಿಕೊಂಡು ಗಲಭೆ ಮುಂದುವರಿಸಿತ್ತು’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.