ಸಮಿತಿ ಬುಧವಾರ ಮುಚ್ಚಿದ ಲಕೋಟೆಯಲ್ಲಿ ಮೂವರ ಹೆಸರುಗಳನ್ನು ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಿದೆ. ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿದ್ಧೇಗೌಡ ಅಧ್ಯಕ್ಷತೆಯ ಶೋಧನಾ ಸಮಿತಿ 13 ಅರ್ಜಿಗಳಲ್ಲಿ ಮೂವರ ಹೆಸರುಗಳನ್ನು ಅಂತಿಮಗೊಳಿಸಿದೆ. ವಿಶ್ವವಿದ್ಯಾಲಯದಲ್ಲಿ ಬೋಧನಾ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿರುವ ಮತ್ತು ಕುಲಸಚಿವರಾಗಿ ಸೇವೆ ಸಲ್ಲಿಸಿರುವವರಿಗೆ ಆದ್ಯತೆ ನೀಡಲಾಗಿದೆ. ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಆಡಳಿತಾತ್ಮಕವಾಗಿ ಉತ್ತಮ ಸಾಧನೆ ಮಾಡಿದವರನ್ನು ಪರಿಗಣಿಸಲಾಗಿದೆ. ಸರ್ಕಾರ ಮೂರು ಹೆಸರುಗಳಲ್ಲಿ ಒಂದನ್ನು ರಾಜ್ಯಪಾಲರಿಗೆ ಕಳುಹಿಸಲಿದೆ. ರಾಜ್ಯಪಾಲರು ಇದನ್ನು ಒಪ್ಪಬಹುದು ಇಲ್ಲವೇ ತಿರಸ್ಕರಿಸಬಹುದು ಎಂದು ಸಿದ್ಧೇಗೌಡ ತಿಳಿಸಿದ್ದಾರೆ.