ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಬುಧವಾರ ನಡೆದ ಪ್ರತಿಭಟನೆಗೆ ಬಂದಿದ್ದ ಬಹುತೇಕರ ಕೈಗಳಲ್ಲಿ ಭಾರತದ ತ್ರಿವರ್ಣ ಧ್ವಜ ಇತ್ತು. ಕೆಲವರು ಒಂದು ಕೈಯಲ್ಲಿ ತಿರಂಗ ಹಿಡಿದಿದ್ದರೆ, ಇನ್ನೊಂದರಲ್ಲಿ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಪ್ರತಿಭಟನಾ ಸಭೆಯತ್ತ ಹೆಜ್ಜೆ ಹಾಕಿದ್ದರು. ಹೆಚ್ಚಿನವರು ‘ಬಾಯ್ಕಾಟ್ ಸಿಎಎ, ಎನ್ಆರ್ಸಿ, ಎನ್ಪಿಆರ್’ ಎಂಬ ಬ್ಯಾಂಡ್ ಅನ್ನು ಹಣೆಗೆ ಕಟ್ಟಿಕೊಂಡಿದ್ದರು.