‘ಪ್ರವಾಸಿ, ಕಮಲ ಮಹಲ್ ಸ್ಮಾರಕದ ಮೇಲ್ಭಾಗಕ್ಕೆ ಹೋಗಿ ಛಾಯಾಚಿತ್ರ ತೆಗೆಯಲು ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಭದ್ರತಾ ಸಿಬ್ಬಂದಿ ಎನ್. ಧರ್ಮಣ್ಣ ಎಂಬುವರು ತಡೆಯಲು ಹೋಗಿದ್ದಾರೆ. ಈ ವೇಳೆ ಅವರೊಂದಿಗೆ ವಾಗ್ವಾದ ನಡೆಸಿ, ಕೈಯಲ್ಲಿದ್ದ ಬಂದೂಕು ಕಿತ್ತುಕೊಂಡು ಹಲ್ಲೆ ನಡೆಸಿದ್ದಾನೆ. ಇದರಿಂದ ಧರ್ಮಣ್ಣ ತಲೆಗೆ ಪೆಟ್ಟಾಗಿ ರಕ್ತಸ್ರಾವವಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹಂಪಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.