ಶನಿವಾರ ಬೆಳಿಗ್ಗೆ 10.30ಕ್ಕೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ವೈದ್ಯರು, ‘ತೀವ್ರ ನಿಗಾ ಘಟಕದಲ್ಲಿ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, ತಜ್ಞ ವೈದ್ಯರ ತಂಡ ನಿಗಾ ವಹಿಸಿದೆ.ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.ಆರೋಗ್ಯ ಸ್ಥಿರವಾಗಿದೆ. ಆದರೂ ಪರಿಸ್ಥಿತಿ ಈಗಲೂ ಗಂಭೀರವಾಗಿಯೇ ಇದೆ’ ಎಂದು ತಿಳಿಸಿದ್ದಾರೆ.