ಆಹಾರ ಕಿಟ್ಗಳ ವಿತರಣೆ ಮತ್ತು ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಣಿವಣ್ಣನ್ ವಿರುದ್ಧ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿದ್ದವು. ಅಲ್ಲದೆ, ಶಾಸಕರು ಕೇಳಿದಷ್ಟು ಆಹಾರ ಧಾನ್ಯಗಳನ್ನು ಕೊಡಲಿಲ್ಲ ಮತ್ತು ಕೊಡಲು ಸಾಧ್ಯವಿಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದ್ದೇ ಅವರ ವಿರುದ್ಧ ದೂರುಗಳು ಮುಖ್ಯಮಂತ್ರಿಗೆ ತಲುಪಲು ಕಾರಣ ಎಂದೂ ಹೇಳಲಾಗುತ್ತಿದೆ.