ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ದಿನಗಳೊಳಗೆ ಕಾರ್ಮಿಕರ ಖಾತೆಗೆ ಹಣ: ಸಚಿವ ಶಿವರಾಮ ಹೆಬ್ಬಾರ್ ಭರವಸೆ

Last Updated 2 ಮೇ 2020, 21:16 IST
ಅಕ್ಷರ ಗಾತ್ರ

ಶಿರಸಿ: ರಾಜ್ಯದಲ್ಲಿ ಬಾಕಿ ಉಳಿದಿರುವ 7.81 ಲಕ್ಷ ಕಾರ್ಮಿಕರ ಖಾತೆಗೆ 15 ದಿನಗಳಲ್ಲಿ, ಸರ್ಕಾರ ನೀಡುವ ಧನಸಹಾಯ ₹ 2000 ಅನ್ನು ಜಮೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಇಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ 21.50 ಲಕ್ಷ ಕಾರ್ಮಿಕರಿದ್ದಾರೆ. ಈಗಾಗಲೇ 12.76 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ‘ ಎಂದರು.

’ಸಾಕಷ್ಟು ಕಾರ್ಮಿಕರ ನೋಂದಣಿ ನವೀಕರಣಗೊಂಡಿಲ್ಲ. ಹೀಗಾಗಿ, ಅವರ ಬ್ಯಾಂಕ್ ಖಾತೆ ಸ್ಥಗಿತವಾಗಿದೆ. ಇಂತಹವರು ಪರ್ಯಾಯ ಖಾತೆ ಸಂಖ್ಯೆ ನೀಡಿದ ತಕ್ಷಣದಲ್ಲಿ ಹಣ ಜಮೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ₹ 321 ಕೋಟಿ ನೀಡಲಾಗಿದೆ. ಇನ್ನು ₹ 220 ಕೋಟಿ ಬಾಕಿ ನೀಡಬೇಕಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT