ಇದೇ 23 ಕ್ಕೆ ಆರಂಭಗೊಳ್ಳುವ ಮುಂಗಾರು ಪೂರ್ವ ಮಳೆಯು ಮೇ 29 ರವರೆಗೆ ಮುಂದುವರಿಯಲಿದೆ. ಇದರಿಂದಾಗಿ ರಾಜ್ಯದ ಹಲವೆಡೆ ಉತ್ತಮ ಮಳೆ ಆಗಲಿದೆ. ಪ್ರಬಲ ಸುಳಿಗಾಳಿಯಿಂದ ದಕ್ಷಿಣ ಒಳನಾಡು ಮತ್ತು ನೆರೆಯ ಜಿಲ್ಲೆಗಳಲ್ಲೂ ಪ್ರಭಾವ ಉಂಟಾಗಲಿದೆ. ಅಲ್ಲದೆ,ಹಿಂದೂ ಮಹಾಸಾಗರದಲ್ಲಿ ಸಮುದ್ರಮಟ್ಟದಿಂದ 3.1 ಕಿಲೊಮೀಟರ್ ಮೇಲ್ಭಾಗದಲ್ಲಿ ಚಂಡಮಾರುತ ಕೇಂದ್ರೀಕೃತವಾಗಲಿದೆ. ಮುಂಗಾರು ಪ್ರವೇಶಕ್ಕೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಜೂನ್ 6ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಅದಾದ ಒಂದೆರಡು ದಿನಗಳಲ್ಲೇ ರಾಜ್ಯವನ್ನು ಪ್ರವೇಶಿಸುತ್ತದೆ.