‘ಕೆಲವು ತಲೆಹಿಡುಕರು ತಮಗೆ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಚುನಾವಣೆಯನ್ನು ಕಡಲೆಪುರಿ ವ್ಯಾಪಾರ ಎಂದು ಭಾವಿಸಿ 20, 30 ಎಂದು ನಂಬರ್ ಹೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಶಾಸಕರಿಗೆ ಅಗೌರವ ನೀಡುವುದು ಬೇಡ. ಯಾವ ಮಂತ್ರಿ ಯಾವ ಹೇಳಿಕೆ ನೀಡುತ್ತಿದ್ದಾರೆ. ಯಾವ ಹೋಟೆಲ್ನಲ್ಲಿ ಯಾರು ಸಭೆ ನಡೆಸುತ್ತಿದ್ದಾರೆ, ನಿನ್ನೆ ರಾತ್ರಿ ಯಾರು, ಎಲ್ಲಿ, ಏನು ಸಭೆ ನಡೆಸಿದ್ದಾರೆ ಎಂಬುದನ್ನು ಗಮನಿಸುತ್ತಿದ್ದೇವೆ. ನಾವು ಇಲ್ಲಿ ಸುಮ್ಮನೆ ಕೂತಿಲ್ಲ. ನಮಗೆ ಬೇರೆಯವರ ಮನೆ ವಿಚಾರ ಬೇಡ. ನಾವುಂಟು ನಮ್ಮ ಮನೆ ಉಂಟು, ನಮ್ಮ ಶಾಸಕರುಂಟು’ ಎಂದು ಹೇಳಿದರು.