ಬೆಂಗಳೂರು: ಕಾಂಗ್ರೆಸ್ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಸಚಿವರಾದವರನ್ನು ಸಿದ್ದರಾಮಯ್ಯ ಕರೆದರೆ ಪಕ್ಷಕ್ಕೆವಾಪಸು ಬರುತ್ತಾರೆ ಎಂದು ಪಕ್ಷದ ಹಿರಿಯ ಮುಖಂಡರಾದ ಮಾರ್ಗರೇಟ್ ಆಳ್ವ ಹೇಳಿದರು.
ಕೆಪಿಸಿಸಿ ಮಹಿಳಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ಈ ವಿಶ್ವಾಸ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕುಳಿತಿದ್ದಅವರು ಈಮಾತು ಕೇಳಿಸಿಕೊಂಡರೂ, ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
‘ಪ್ರಸ್ತುತ ರಾಜಕಾರಣವು ಖರೀದಿ– ಮಾರಾಟದ ಸ್ಥಿತಿಯನ್ನು ತಲುಪಿದೆ. ಆಪರೇಷನ್ ಕಮಲದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರಿಗೆ ಇನ್ನೂ ಚೆನ್ನಾಗಿ ತಿಳಿದಿದೆ. ಆದರೆ ಅವರು ಕರೆದರೆ ಬಿಜೆಪಿಗೆ ಹೋದವರು ಕಾಂಗ್ರೆಸ್ಗೆ ಬರುತ್ತಾರೆ’ ಎಂದರು.
ಸತ್ಯ ಇರಬಹುದು:ಈ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ‘ಮಾರ್ಗರೇಟ್ ಆಳ್ವ ಹೇಳಿರುವುದರಲ್ಲಿ ಸತ್ಯಾಂಶ ಇರಬಹುದು. ಸುಳ್ಳು ಹೇಳಲು ಸಾಧ್ಯವೇ?’ ಎಂದಿದ್ದಾರೆ.
‘ಇಂತಹ ವಿಚಾರಗಳಲ್ಲಿ ಯಾರೂ ಸುಮ್ಮನೇ ಹೇಳಿಕೆ ಕೊಡುವುದಿಲ್ಲ. ಸತ್ಯಾಂಶ ಇರುತ್ತದೆ. ಮುಂದೆ ಏನಾಗಲಿದೆ ಎಂಬುದನ್ನು ಕಾದು ನೋಡುತ್ತೇನೆ’ ಎಂದೂ ಅವರು ಹೇಳಿದರು.