ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಸಿದ್ಧತೆಗಳು ಆರಂಭವಾಗಿವೆ. ಭಕ್ತರು ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆಯಲು ಅನುವಾಗುವಂತೆ ಚೌಕಾಕಾರದ ಬಾಕ್ಸ್ ಮಾಡಲಾಗಿದೆ. ‘ದೇವಾಲಯಕ್ಕೆ ಬರುವ ಭಕ್ತರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳಗೆ ಬಿಡಲಾಗುತ್ತದೆ. ಅದಕ್ಕೂ ಮುನ್ನ ಅವರಿಗೆ ಕೈಗೆ ಸ್ಯಾನಿಟೈಸರ್ ಹಾಕಲಾಗುತ್ತದೆ. ಪ್ರತಿಯೊಬ್ಬರ ವಿವರವನ್ನು ದಾಖಲಿಸಿಕೊಳ್ಳಲಾಗುತ್ತದೆ. ತೀರ್ಥ, ಪ್ರಸಾದ ವಿತರಣೆಗೆ ಅವಕಾಶವಿಲ್ಲ. ಮಧ್ಯಾಹ್ನದ ಮಹಾಮಂಗಳಾರತಿಯ ದೀಪವನ್ನು ಬೆಳಗಿಸಿಡಲಾಗುತ್ತದೆ’ ಎಂದು ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ ಪ್ರತಿಕ್ರಿಯಿಸಿದ್ದಾರೆ.