ಬಳ್ಳಾರಿಯಲ್ಲಿ ಆಯೋಜಿಸಿದ್ದ ಮದುವೆ ತಾಳಿ ಕಾರ್ಯದಲ್ಲಿ ಪಾಲ್ಗೊಳ್ಳಲು ಮುಂಡರಗಿಯಿಂದ ವರನ ಸಂಬಂಧಿಕರು ಹೊರಟಿದ್ದರು. ಅವರ ವಾಹನ ಜನರ ಮಧ್ಯೆ ಸಿಲುಕಿಕೊಂಡಿತ್ತು. ‘ಮದುವೆ ತಾಳಿ ಕಾರ್ಯಕ್ಕೆ ವಿಳಂಬವಾಗುತ್ತಿದೆ. ನಮಗೆ ಹೋಗಲು ಅವಕಾಶ ಮಾಡಿಕೊಡಿ’ ಎಂದು ಪೊಲೀಸರಿಗೆ ಮನವಿ ಮಾಡಿದರು. ಆದರೆ, ಕಿಕ್ಕಿರಿದು ಜನ ಸೇರಿದ್ದರಿಂದ ಪೊಲೀಸರು ಏನೂ ಮಾಡಲಾಗಲಿಲ್ಲ. ಹೀಗಾಗಿ ಅವರು ತಡವಾಗಿ ಮದುವೆಗೆ ಹೋಗುವಂತಾಯಿತು.ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ತಡಹೊತ್ತು ವಾಹನಗಳು ಸಾಲುಗಟ್ಟಿ ನಿಂತಿದ್ದವು.