ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮ ಯೋಧ ಗುರು ಪಂಚಭೂತಗಳಲ್ಲಿ ಲೀನ

Last Updated 16 ಫೆಬ್ರುವರಿ 2019, 16:11 IST
ಅಕ್ಷರ ಗಾತ್ರ

ಮಂಡ್ಯ: ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಅಂತ್ಯ ಸಂಸ್ಕಾರ ಶನಿವಾರ ನೆರವೇರಿತು. ಇಲ್ಲಿನಭಾರತೀನಗರ ಸಮೀಪದ ಮೆಳ್ಳಹಳ್ಳಿಯ ಹೆಬ್ಬಾಳ ಬಳಿಯಿರುವ 10ಗುಂಟೆ ಸರ್ಕಾರಿ ಜಾಗದಲ್ಲಿ ಅಂತ್ಯ ಕ್ರಿಯೆ ನಡೆಯಿತು.

ಸಕಲ ಸರ್ಕಾರಿ ಗೌರವಗಳನ್ನು ಸಮರ್ಪಿಸಿದ ಬಳಿಕ ಹುತಾತ್ಮ ಗುರು ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು. ನೆರದಿದ್ದ ಅನೇಕರು ಕೈಮುಗಿದು ಕಣ್ಣೀರಾದರು. ಹುತಾತ್ಮನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತು.

ಅಗ್ನಿ ಸ್ಪರ್ಶಕ್ಕೂ ಮುನ್ನ ಹುತಾತ್ಮ ಯೋಧನ ಪತ್ನಿ ಕಲಾವತಿ ಪಾರ್ಥಿವ ಶರೀರದೆದುರು ನಿಂತು ಸೆಲ್ಯೂಟ್‌ ಮಾಡಿ ಅಂತಿಮ ಗೌರವ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT