ತುಂಗಭದ್ರಾ ನದಿ ನೀರುಸೇವಿಸುತ್ತಿದ್ದ ಜನರಿಗೆ 15 ದಿನಗಳಿಂದ ಕೊಳವೆಬಾವಿಯ ನೀರನ್ನು ಶುದ್ಧೀಕರಿಸದೆ ಪೂರೈಸಲಾಗುತ್ತಿದೆ. ಕೊಳವೆಬಾವಿ ಸುಸ್ಥಿತಿಯಲ್ಲಿ ಇಲ್ಲದ ಬಡಾವಣೆಗಳಿಗೆ ಪಟ್ಟಣ ಪಂಚಾಯಿತಿಯಿಂದ ಟ್ಯಾಂಕರ್ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕೂ ಜನರು ಕರೆ ಮಾಡಿ ಮನವಿ ಮಾಡಬೇಕಿದೆ. ಸಮಸ್ಯೆಗಳ ಬಗ್ಗೆ ಶಾಸಕರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.