<p><strong>ಬೆಂಗಳೂರು:</strong> ಮುಜರಾಯಿ ಇಲಾಖೆಯ ‘ಎ’ ದರ್ಜೆ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ‘ಸಪ್ತಪದಿ‘ ಯೋಜನೆಗೆ ಕೊರೊನಾ ಸೂತಕ ತಂದಿದ್ದು, ವಿವಾಹ ದಿನಾಂಕಗಳನ್ನು ಮುಂದೂಡುವುದು ಬಹುತೇಕ ಖಚಿತವಾಗಿದೆ.</p>.<p>ಏಪ್ರಿಲ್ 26 ಮತ್ತು ಮೇ 24ರಂದು ಈ ವಿವಾಹ ಸಮಾರಂಭಗಳು ನಡೆಯಬೇಕಿತ್ತು. ಏಪ್ರಿಲ್ 15ರವರೆಗೆ ರಾಷ್ಟ್ರವ್ಯಾಪಿ ಲಾಕ್ಡೌನ್ ಮಾಡಲಾಗಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ಅದು ಮತ್ತೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ‘ಸಪ್ತಪದಿ’ ತುಳಿಯುವ ನೂರಾರು ಜೋಡಿಯ ಕನಸನ್ನು ಸಹ ಮುಂದೂಡಬೇಕಾಗಿದೆ.</p>.<p>ಸುಮಾರು 750 ಜೋಡಿ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಸಿಂಧನೂರಿನ ಅಂಬಾದೇವಿ ದೇವಸ್ಥಾನದಲ್ಲಿ 160ಕ್ಕೂ ಅಧಿಕ ಜೋಡಿಯ ವಿವಾಹಕ್ಕೆ ಸಿದ್ಧತೆ ನಡೆದಿತ್ತು. ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ, ಗಂಗಾವತಿ ತಾಲ್ಲೂಕು ಕನಕಗಿರಿಯ ಕನಕಾ ಚಲಪತಿ ದೇವಸ್ಥಾನ, ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಗಳಲ್ಲಿ 30ಕ್ಕೂ ಅಧಿಕ ಜೋಡಿ ಹೆಸರು ನೋಂದಾಯಿಸಿದ್ದರು.</p>.<p><strong>ಭರ್ಜರಿ ತಯಾರಿ:</strong> ಯೋಜನೆ ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಜನಕಲ್ಯಾಣ ಯೋಜನೆ ಎಂಬಂತೆ ಬಿಂಬಿತವಾಗಿತ್ತು. ಅದೆಷ್ಟೋ ಬಡವರು ಮದುವೆಗಾಗಿ ಭಾರಿ ಸಾಲ ಮಾಡುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರವೇ ಒಂದೊಂದು ಜೋಡಿಗೆ ಸುಮಾರು ₹ 55 ಸಾವಿರ ಖರ್ಚು ಮಾಡಿ ಮದುವೆ ಮಾಡಿಸುವ ಯೋಜನೆಯ ಪ್ರಚಾರವನ್ನು ಹಲವೆಡೆ ಭರ್ಜರಿಯಾಗಿ ನಡೆಸಲಾಗಿತ್ತು. ‘ಕೊರೊನಾ ನಾಡಿಗೇ ಅಂಟಿದ ಸೋಂಕು, ಹೀಗಾಗಿ ಲಾಕ್ಡೌನ್ ಮಾಡುವುದು ಅನಿವಾರ್ಯವಾಯಿತು. ಅದೇ ರೀತಿ ಈ ಸಾಮೂಹಿಕ ವಿವಾಹವನ್ನು ಮುಂದೂಡುವುದು ಅನಿವಾರ್ಯವಾಗಲಿದೆ’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>*<br />ಮುಂದೂಡುವುದನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ, ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.<br /><em><strong>-ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಜರಾಯಿ ಇಲಾಖೆಯ ‘ಎ’ ದರ್ಜೆ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ‘ಸಪ್ತಪದಿ‘ ಯೋಜನೆಗೆ ಕೊರೊನಾ ಸೂತಕ ತಂದಿದ್ದು, ವಿವಾಹ ದಿನಾಂಕಗಳನ್ನು ಮುಂದೂಡುವುದು ಬಹುತೇಕ ಖಚಿತವಾಗಿದೆ.</p>.<p>ಏಪ್ರಿಲ್ 26 ಮತ್ತು ಮೇ 24ರಂದು ಈ ವಿವಾಹ ಸಮಾರಂಭಗಳು ನಡೆಯಬೇಕಿತ್ತು. ಏಪ್ರಿಲ್ 15ರವರೆಗೆ ರಾಷ್ಟ್ರವ್ಯಾಪಿ ಲಾಕ್ಡೌನ್ ಮಾಡಲಾಗಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ಅದು ಮತ್ತೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ‘ಸಪ್ತಪದಿ’ ತುಳಿಯುವ ನೂರಾರು ಜೋಡಿಯ ಕನಸನ್ನು ಸಹ ಮುಂದೂಡಬೇಕಾಗಿದೆ.</p>.<p>ಸುಮಾರು 750 ಜೋಡಿ ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಸಿಂಧನೂರಿನ ಅಂಬಾದೇವಿ ದೇವಸ್ಥಾನದಲ್ಲಿ 160ಕ್ಕೂ ಅಧಿಕ ಜೋಡಿಯ ವಿವಾಹಕ್ಕೆ ಸಿದ್ಧತೆ ನಡೆದಿತ್ತು. ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ, ಗಂಗಾವತಿ ತಾಲ್ಲೂಕು ಕನಕಗಿರಿಯ ಕನಕಾ ಚಲಪತಿ ದೇವಸ್ಥಾನ, ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಗಳಲ್ಲಿ 30ಕ್ಕೂ ಅಧಿಕ ಜೋಡಿ ಹೆಸರು ನೋಂದಾಯಿಸಿದ್ದರು.</p>.<p><strong>ಭರ್ಜರಿ ತಯಾರಿ:</strong> ಯೋಜನೆ ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಜನಕಲ್ಯಾಣ ಯೋಜನೆ ಎಂಬಂತೆ ಬಿಂಬಿತವಾಗಿತ್ತು. ಅದೆಷ್ಟೋ ಬಡವರು ಮದುವೆಗಾಗಿ ಭಾರಿ ಸಾಲ ಮಾಡುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರವೇ ಒಂದೊಂದು ಜೋಡಿಗೆ ಸುಮಾರು ₹ 55 ಸಾವಿರ ಖರ್ಚು ಮಾಡಿ ಮದುವೆ ಮಾಡಿಸುವ ಯೋಜನೆಯ ಪ್ರಚಾರವನ್ನು ಹಲವೆಡೆ ಭರ್ಜರಿಯಾಗಿ ನಡೆಸಲಾಗಿತ್ತು. ‘ಕೊರೊನಾ ನಾಡಿಗೇ ಅಂಟಿದ ಸೋಂಕು, ಹೀಗಾಗಿ ಲಾಕ್ಡೌನ್ ಮಾಡುವುದು ಅನಿವಾರ್ಯವಾಯಿತು. ಅದೇ ರೀತಿ ಈ ಸಾಮೂಹಿಕ ವಿವಾಹವನ್ನು ಮುಂದೂಡುವುದು ಅನಿವಾರ್ಯವಾಗಲಿದೆ’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>*<br />ಮುಂದೂಡುವುದನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ, ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.<br /><em><strong>-ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>