ತಾಲ್ಲೂಕಿನ ಟಿ.ಬೊಮ್ಮನಳ್ಳಿ ಗ್ರಾಮದ ಮಸೀದಿಯಲ್ಲಿ ಮಂಗಳವಾರ ಸಂಜೆ 15ಕ್ಕೂ ಅಧಿಕ ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ಸುಶೀಲಕುಮಾರ ಮತ್ತು ಅಪರಾಧ ವಿಭಾಗದ ಪಿಎಸ್ಐ ಅಯ್ಯಪ್ಪ ಅವರ ನೇತೃತ್ವದಲ್ಲಿ ಪೊಲೀಸರು 14 ಜನರನ್ನು ವಶಕ್ಕೆ ಪಡೆದಿದ್ದು, ಒಬ್ಬರು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.