ಬೆಂಗಳೂರು: ‘ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್’ ನೀಡುವ ‘ಮಾಸ್ತಿ ಪ್ರಶಸ್ತಿ’ ಪ್ರಕಟವಾಗಿದೆ.
ಕೆ.ಮರುಳಸಿದ್ದಪ್ಪ (ವಿಮರ್ಶೆ), ಈಶ್ವರಚಂದ್ರ (ಕಥೆ), ಮೊಗಳ್ಳಿ ಗಣೇಶ್ (ಕಥೆ), ಸವಿತಾ ನಾಗಭೂಷಣ (ಕಾವ್ಯ), ಬೊಳುವಾರು ಮಹಮದ್ ಕುಂಞ (ಸೃಜನಶೀಲ) ಅವರು 2019ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
‘ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ 29ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ನಡೆಯಲಿದೆ. ಪುರಸ್ಕೃತರಿಗೆ ಫಲಕ, ₹25 ಸಾವಿರ ಬಹುಮಾನ ನೀಡಲಾಗುವುದು’ ಎಂದು ಟ್ರಸ್ಟ್ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ತಿಳಿಸಿದ್ದಾರೆ.
ಮಾವಿನಕೆರೆ ರಂಗನಾಥನ್ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಎಂ.ಎಚ್.ಕೃಷ್ಣಯ್ಯ, ಜಿ.ಎನ್.ರಂಗನಾಥ್ ರಾವ್, ಬಿ.ಆರ್.ಲಕ್ಷ್ಮಣರಾವ್, ಕೃಷ್ಣಮೂರ್ತಿ ಹನೂರು, ಉಮಾ ಕೇಸರಿ, ರವಿಕುಮಾರ್ ಇದ್ದರು.