<p><strong>ಕಲಬುರ್ಗಿ:</strong> ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಎಂದರೆ ತಕ್ಷಣ ನೆನಪಾಗುವುದು ಮಾತೆ ಮಾಣಿಕೇಶ್ವರಿ ಅಮ್ಮನವರು.</p>.<p>ದಶಕಗಳ ರಾಜ್ಯದ ಪ್ರಭಾವಿ ರಾಜಕಾರಣಿಗಳೂ ಮಾಣಿಕೇಶ್ವರಿ ದೇವಿ ಅವರ ಭೇಟಿಗಾಗಿ ಗಂಟೆಗಟ್ಟಲೇ ಕಾದದ್ದುಂಟು.</p>.<p>ನಿರಾಹಾರಿಯಾಗಿಯೇ ಜೀವಿಸಿದ್ದರು ಎಂದು ನಂಬಲಾದ ಮಾತೆ ಮಾಣಿಕೇಶ್ವರಿ ಅವರು ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕೊಡುತ್ತಿದ್ದರು.</p>.<p>ಅವರು ದರ್ಶನ ಕೊಡುತ್ತಾರೆ ಎಂದರೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರಪ್ರದೇಶದ ಲಕ್ಷಾಂತರ ಭಕ್ತರು ಯಾನಾಗುಂದಿಗೆ ಬಂದು ಸೇರುತ್ತಿದ್ದರು.</p>.<p>ಇತ್ತೀಚೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಮಾಣಿಕೇಶ್ವರಿ ಅವರನ್ನು ಭೇಟಿ ಮಾಡಿ ದರ್ಶನ ಪಡೆದಿದ್ದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/yanagudi-mate-manikeshwari-passed-away-710735.html" target="_blank">ಕಲಬುರ್ಗಿ: ಮಾತೆ ಮಾಣಿಕೇಶ್ವರಿ ಅಮ್ಮ ಲಿಂಗೈಕ್ಯ</a></strong></p>.<p>ಅಹಿಂಸಾ ಧರ್ಮವನ್ನು ಪಾಲಿಸುತ್ತಿದ್ದ ಅವರು ತಮ್ಮ ಭಕ್ತರಿಗೆ ಪಶು ಪಕ್ಷಿಗಳನ್ನು ಕೊಲ್ಲದಂತೆ ಉಪದೇಶ ನೀಡಿದ್ದರು.</p>.<p>ಇತ್ತೀಚೆಗೆ ಯಾನಾಗಾಂದಿ ಪೀಠದ ಟ್ರಸ್ಟ್ ಕಮಿಟಿಯವರು ಅವರ ಆರೋಗ್ಯ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ಸೇಡಂನ ಶಿವಕುಮಾರ ನಿಡಗುಂದಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಹೈಕೋರ್ಟ್ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡದೊಂದಿಗೆ ತೆರಳಿ ಆರೋಗ್ಯ ತಪಾಸಣೆ ಮಾಡಿದ್ದರು.</p>.<p>ಮಾತೆ ಮಾಣಿಕೇಶ್ವರಿ ಅವರನ್ನು ನೋಡಿಕೊಳ್ಳಲು ಮಹಿಳೆಯೊಬ್ಬರನ್ನು ನಿಯೋಜಿಸಲಾಗಿದೆ ಎಂದು ಯಾನಾಗುಂದಿ ಪೀಠದ ಆಡಳಿತಾಧಿಕಾರಿ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಎಂದರೆ ತಕ್ಷಣ ನೆನಪಾಗುವುದು ಮಾತೆ ಮಾಣಿಕೇಶ್ವರಿ ಅಮ್ಮನವರು.</p>.<p>ದಶಕಗಳ ರಾಜ್ಯದ ಪ್ರಭಾವಿ ರಾಜಕಾರಣಿಗಳೂ ಮಾಣಿಕೇಶ್ವರಿ ದೇವಿ ಅವರ ಭೇಟಿಗಾಗಿ ಗಂಟೆಗಟ್ಟಲೇ ಕಾದದ್ದುಂಟು.</p>.<p>ನಿರಾಹಾರಿಯಾಗಿಯೇ ಜೀವಿಸಿದ್ದರು ಎಂದು ನಂಬಲಾದ ಮಾತೆ ಮಾಣಿಕೇಶ್ವರಿ ಅವರು ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕೊಡುತ್ತಿದ್ದರು.</p>.<p>ಅವರು ದರ್ಶನ ಕೊಡುತ್ತಾರೆ ಎಂದರೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರಪ್ರದೇಶದ ಲಕ್ಷಾಂತರ ಭಕ್ತರು ಯಾನಾಗುಂದಿಗೆ ಬಂದು ಸೇರುತ್ತಿದ್ದರು.</p>.<p>ಇತ್ತೀಚೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಮಾಣಿಕೇಶ್ವರಿ ಅವರನ್ನು ಭೇಟಿ ಮಾಡಿ ದರ್ಶನ ಪಡೆದಿದ್ದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/yanagudi-mate-manikeshwari-passed-away-710735.html" target="_blank">ಕಲಬುರ್ಗಿ: ಮಾತೆ ಮಾಣಿಕೇಶ್ವರಿ ಅಮ್ಮ ಲಿಂಗೈಕ್ಯ</a></strong></p>.<p>ಅಹಿಂಸಾ ಧರ್ಮವನ್ನು ಪಾಲಿಸುತ್ತಿದ್ದ ಅವರು ತಮ್ಮ ಭಕ್ತರಿಗೆ ಪಶು ಪಕ್ಷಿಗಳನ್ನು ಕೊಲ್ಲದಂತೆ ಉಪದೇಶ ನೀಡಿದ್ದರು.</p>.<p>ಇತ್ತೀಚೆಗೆ ಯಾನಾಗಾಂದಿ ಪೀಠದ ಟ್ರಸ್ಟ್ ಕಮಿಟಿಯವರು ಅವರ ಆರೋಗ್ಯ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ಸೇಡಂನ ಶಿವಕುಮಾರ ನಿಡಗುಂದಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಹೈಕೋರ್ಟ್ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡದೊಂದಿಗೆ ತೆರಳಿ ಆರೋಗ್ಯ ತಪಾಸಣೆ ಮಾಡಿದ್ದರು.</p>.<p>ಮಾತೆ ಮಾಣಿಕೇಶ್ವರಿ ಅವರನ್ನು ನೋಡಿಕೊಳ್ಳಲು ಮಹಿಳೆಯೊಬ್ಬರನ್ನು ನಿಯೋಜಿಸಲಾಗಿದೆ ಎಂದು ಯಾನಾಗುಂದಿ ಪೀಠದ ಆಡಳಿತಾಧಿಕಾರಿ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>