ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳಜಾಭವಾನಿ ದರ್ಶನಕ್ಕೆ ಸಚಿವರ ಸೈಕಲ್‌ ಯಾತ್ರೆ

Last Updated 21 ಅಕ್ಟೋಬರ್ 2018, 19:29 IST
ಅಕ್ಷರ ಗಾತ್ರ

ಬೀದರ್: ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಮೂರನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಪ್ರಯುಕ್ತ ಹರಕೆ ತೀರಿಸಲು ಮಹಾರಾಷ್ಟ್ರದ ತುಳಜಾಪುರದಲ್ಲಿರುವ ತುಳಜಾಭವಾನಿ ದರ್ಶನ ಪಡೆಯಲು ಭಾನುವಾರ ಸೈಕಲ್‌ ಯಾತ್ರೆ ಆರಂಭಿಸಿದರು.

ಸಚಿವರು ಬೆಳಿಗ್ಗೆ ರಾಮಮಂದಿರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಹೊಸ ಸೈಕಲ್‌ ಏರಿ ಯಾತ್ರೆ ಶುರು ಮಾಡಿದರು. ಕುಟುಂಬದ ಸದಸ್ಯರು ಬಂಡೆಪ್ಪ ಅವರ ಹಣೆಗೆ ಕುಂಕುಮ ತಿಲಕವಿಟ್ಟು, ಆರತಿ ಬೆಳಗಿದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರು ಗುಲಾಬಿ
ಮಾಲೆಗಳನ್ನು ಹಾಕಿ ಶುಭ ಕೋರಿದರು.

2004 ಹಾಗೂ 2008ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದ ಸಂದರ್ಭದಲ್ಲಿ ಸೈಕಲ್‌ ಮೇಲೆ ತುಳಜಾಪುರಕ್ಕೆ ತೆರಳಿದ್ದರು. 2018ರ ಚುನಾವಣೆಯಲ್ಲೂ ಜಯ ಸಾಧಿಸಿದ್ದರಿಂದ ಮೂರನೇ ಬಾರಿಗೆ ತುಳಜಾಪುರಕ್ಕೆ ಸೈಕಲ್‌ ಯಾತ್ರೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT