ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೀ ಟೂ ಅಭಿಯಾನ ಎಂದರೇನೂ ಎಂದೇ ರಾಜ್ಯದ ಬಹಳ ಜನರಿಗೆ ಗೊತ್ತಿಲ್ಲ. ಮೀ ಟೂ ಅಭಿಯಾನದ ಅಂಗವಾಗಿ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣಕ್ಕೆ ಕೇಂದ್ರ ಸಚಿವ ಅಕ್ಬರ್ ರಾಜೀನಾಮೆ ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್ ಅವರನ್ನೂ ಆ ಸ್ಥಾನದಿಂದ ತೆಗೆಯಲಾಯಿತು’ ಎಂದರು.