ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶಾಸಕ, ಮಂತ್ರಿ ಮತ್ತು ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ನಾನೇನೂ ಸನ್ಯಾಸಿಯಲ್ಲ. ನನಗೂ ಆಸೆ ಇದೆ. ಮುಂಚೆ ಪೊಲೀಸ್ ಅಧಿಕಾರಿಯಾಗಿದ್ದೆ. ಬಳಿಕ ಶಾಸಕನಾದೆ. ಈಗ, ಮಂತ್ರಿ ಆಗಿದ್ದೇನೆ. ಆದರೆ, ಎಲ್ಲವೂ ಅಂದುಕೊಂಡಂತೆ ಆಗುವುದಿಲ್ಲ’ ಎಂದು ತಿಳಿಸಿದರು.