ಕೊರೊನಾ ಸೋಂಕು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಭಾನುವಾರ ನಗರದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕಾರಜೋಳ, ‘ಅವರು ಇರುವಲ್ಲಿಯೇ ಊಟದ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಲಿದ್ದಾರೆ. ತಮ್ಮ ಊರಿಗೆ ಮರಳುವುದರಿಂದ ಸೋಂಕು ಹರಡುವ ಭೀತಿ ಗ್ರಾಮಸ್ಥರಲ್ಲಿ ಉಂಟಾಗಬಹುದು. ಹೀಗಾಗಿ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಗಡಿಯಲ್ಲಿರುವ ಜನರನ್ನು ಬಿಡಬಾರದು’ ಎಂದರು.