ಒಂದೂವರೆ ತಿಂಗಳುಗಳಿಂದ ಲಾಕ್ಡೌನ್ನಿಂದ ಅವರು ಪರಸ್ಪರ ಭೇಟಿಯಾಗಲು ಆಗಿರಲಿಲ್ಲ. ಕ್ಷೇತ್ರದ ಸಮಸ್ಯೆ ಕುರಿತು ಚರ್ಚಿಸಲು ಒಟ್ಟಿಗೆ ಸಭೆ ಸೇರಿರಬಹುದು. ವಿಧಾನಪರಿಷತ್ ಹಾಗೂ ರಾಜ್ಯಸಭಾ ಚುನಾವಣಾ ವಿಷಯವೂ ಇದೇ ವೇಳೆ ಚರ್ಚೆಗೆ ಬಂದಿದ್ದರೆ ಅದೂ ತಪ್ಪಲ್ಲ. ಮಾಧ್ಯಮದವರು ಎಲ್ಲವನ್ನೂ ತಿರುಚುವ ಪ್ರಯತ್ನ ನಡೆಸಿದ್ದಾರೆ ಎಂದು ಹರಿಹಾಯ್ದರು.