<p><strong>ಬೆಂಗಳೂರು:</strong> ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಆರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>‘ಡಿಪ್ಲೊಮೇಟ್ ಆಫ್ ನ್ಯಾಷನಲ್ ಬೋರ್ಡ್’ (ಡಿಎನ್ಬಿ) ನಿಯಮದಡಿ ಸ್ನಾತಕೋತ್ತರ ಕೋರ್ಸ್ ಆರಂಭಿಸಲಾಗುತ್ತಿದೆ. ಇದರಿಂದ ಹೆಚ್ಚುವರಿಯಾಗಿ 72 ಸೀಟುಗಳು ಸೃಷ್ಟಿ ಆಗುತ್ತವೆ ಎಂದು ಸಂಪುಟ ಸಭೆಯ ಬಳಿಕ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p>.<p>ಹೊಳೇನರಸಿಪುರ, ದೊಡ್ಡಬಳ್ಳಾಪುರ, ಗಂಗಾವತಿ, ಶಿರಾ, ಬಸವಕಲ್ಯಾಣ, ಹಾವೇರಿ, ಚಿಕ್ಕಬಳ್ಳಾಪುರ, ಯಾದಗಿರಿ, ಚಿಕ್ಕಮಗಳೂರು ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>‘ನೀಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ₹ 30 ಸಾವಿರದಿಂದ ₹40 ಸಾವಿರ ಸ್ಟೈಫಂಡ್ ನೀಡಲಾಗುತ್ತದೆ. ಇದರಿಂದ ಸಾತ್ನಕೋತ್ತರ ವೈದ್ಯಕೀಯ ಸೀಟುಗಳು ಹೆಚ್ಚಳವಾಗುವುದರ ಜೊತೆಗೆ ನಮ್ಮ ಆಸ್ಪತ್ರೆಗಳಿಗೆ ತಜ್ಞ ವೈದ್ಯರ ಸೇವೆ ದೊರಕಿದಂತಾಗುತ್ತದೆ’ ಎಂದು ಹೇಳಿದರು.</p>.<p><strong>ವಿಮಾ ಕಂತು ಪಾವತಿಸಲು ತೀರ್ಮಾನ</strong></p>.<p>* ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರ ವಿಮಾ ಕಂತು ಪಾವತಿಸಲು ತೀರ್ಮಾನಿಸಲಾಗಿದೆ. ಕೆಲವು ಬೆಳೆಗಳಿಗೆ ಶೇ1.5, ಶೇ 2 ಮತ್ತು ಶೇ 5 ರಂತೆರೈತರು ಪ್ರೀಮಿಯಂ ಪಾವತಿಸಬೇಕು. ಉಳಿದ ವಿಮಾ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ 50:50 ರ ಅನುಪಾತದಲ್ಲಿ ಪಾವತಿಸಲಿವೆ. ಈ ಸಾಲಿನ ಪ್ರೀಮಿಯಂ ಪಾವತಿಗಾಗಿ ರಾಜ್ಯ ಸರ್ಕಾರ₹ 546.21 ಕೋಟಿ ಪಾವತಿಸಲಿದೆ.</p>.<p>* ಹೇಮಾವತಿ ಬಲದಂಡೆ ನಾಲೆ ಶಿಥಿಲವಾಗಿರುವುದರಿಂದ 0.00 ಕಿ.ಮೀ ರಿಂದ 92.104 ಕಿ.ಮೀ ವರೆಗೆ ನಾಲೆ ಆಧುನೀಕರಣ ಕಾಮಗಾರಿಗೆ₹ 422.75 ಕೋಟಿ.</p>.<p>* ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಾವಗಡದಲ್ಲಿ 60 ಹಾಸಿಗೆಗಳ ಹೆರಿಗೆ ಆಸ್ಪತ್ರೆ,ದಾವಣಗೆರೆಯಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆ, ಬಳ್ಳಾರಿಯಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆ ಮತ್ತು ರಾಯಚೂರು ಆಸ್ಪತ್ರೆಗೆ ಹೆಚ್ಚುವರಿ ಸೌಲಭ್ಯಗಳ ಕಾಮಗಾರಿಗೆ ₹71.80 ಕೋಟಿ ಬಿಡುಗಡೆಗೆ ಒಪ್ಪಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಆರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>‘ಡಿಪ್ಲೊಮೇಟ್ ಆಫ್ ನ್ಯಾಷನಲ್ ಬೋರ್ಡ್’ (ಡಿಎನ್ಬಿ) ನಿಯಮದಡಿ ಸ್ನಾತಕೋತ್ತರ ಕೋರ್ಸ್ ಆರಂಭಿಸಲಾಗುತ್ತಿದೆ. ಇದರಿಂದ ಹೆಚ್ಚುವರಿಯಾಗಿ 72 ಸೀಟುಗಳು ಸೃಷ್ಟಿ ಆಗುತ್ತವೆ ಎಂದು ಸಂಪುಟ ಸಭೆಯ ಬಳಿಕ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p>.<p>ಹೊಳೇನರಸಿಪುರ, ದೊಡ್ಡಬಳ್ಳಾಪುರ, ಗಂಗಾವತಿ, ಶಿರಾ, ಬಸವಕಲ್ಯಾಣ, ಹಾವೇರಿ, ಚಿಕ್ಕಬಳ್ಳಾಪುರ, ಯಾದಗಿರಿ, ಚಿಕ್ಕಮಗಳೂರು ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>‘ನೀಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ₹ 30 ಸಾವಿರದಿಂದ ₹40 ಸಾವಿರ ಸ್ಟೈಫಂಡ್ ನೀಡಲಾಗುತ್ತದೆ. ಇದರಿಂದ ಸಾತ್ನಕೋತ್ತರ ವೈದ್ಯಕೀಯ ಸೀಟುಗಳು ಹೆಚ್ಚಳವಾಗುವುದರ ಜೊತೆಗೆ ನಮ್ಮ ಆಸ್ಪತ್ರೆಗಳಿಗೆ ತಜ್ಞ ವೈದ್ಯರ ಸೇವೆ ದೊರಕಿದಂತಾಗುತ್ತದೆ’ ಎಂದು ಹೇಳಿದರು.</p>.<p><strong>ವಿಮಾ ಕಂತು ಪಾವತಿಸಲು ತೀರ್ಮಾನ</strong></p>.<p>* ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರ ವಿಮಾ ಕಂತು ಪಾವತಿಸಲು ತೀರ್ಮಾನಿಸಲಾಗಿದೆ. ಕೆಲವು ಬೆಳೆಗಳಿಗೆ ಶೇ1.5, ಶೇ 2 ಮತ್ತು ಶೇ 5 ರಂತೆರೈತರು ಪ್ರೀಮಿಯಂ ಪಾವತಿಸಬೇಕು. ಉಳಿದ ವಿಮಾ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ 50:50 ರ ಅನುಪಾತದಲ್ಲಿ ಪಾವತಿಸಲಿವೆ. ಈ ಸಾಲಿನ ಪ್ರೀಮಿಯಂ ಪಾವತಿಗಾಗಿ ರಾಜ್ಯ ಸರ್ಕಾರ₹ 546.21 ಕೋಟಿ ಪಾವತಿಸಲಿದೆ.</p>.<p>* ಹೇಮಾವತಿ ಬಲದಂಡೆ ನಾಲೆ ಶಿಥಿಲವಾಗಿರುವುದರಿಂದ 0.00 ಕಿ.ಮೀ ರಿಂದ 92.104 ಕಿ.ಮೀ ವರೆಗೆ ನಾಲೆ ಆಧುನೀಕರಣ ಕಾಮಗಾರಿಗೆ₹ 422.75 ಕೋಟಿ.</p>.<p>* ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಾವಗಡದಲ್ಲಿ 60 ಹಾಸಿಗೆಗಳ ಹೆರಿಗೆ ಆಸ್ಪತ್ರೆ,ದಾವಣಗೆರೆಯಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆ, ಬಳ್ಳಾರಿಯಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆ ಮತ್ತು ರಾಯಚೂರು ಆಸ್ಪತ್ರೆಗೆ ಹೆಚ್ಚುವರಿ ಸೌಲಭ್ಯಗಳ ಕಾಮಗಾರಿಗೆ ₹71.80 ಕೋಟಿ ಬಿಡುಗಡೆಗೆ ಒಪ್ಪಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>