<p><strong>ಬೆಂಗಳೂರು</strong>: ‘ರಾಜ್ಯದಾದ್ಯಂತ ಕಾರಾಗೃಹಗಳಲ್ಲಿ ಕೈದಿಗಳು ತಮ್ಮ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.</p>.<p>ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ, ಸರ್ಕಾರದ ಪರ ವಕೀಲ ವೈ.ಎಚ್. ವಿಜಯಕುಮಾರ್, ಕೇಂದ್ರ ಕಾರಾಗೃಹದಲ್ಲಿನ ಸಂದರ್ಶನ ವ್ಯವಸ್ಥೆಯ ಕುರಿತಂತೆ ಫೋಟೊಗಳನ್ನು ಒಳಗೊಂಡ ವರದಿಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಿದರು.</p>.<p>ವರದಿ ಪರಿಶೀಲಿಸಿದ ನ್ಯಾಯಪೀಠ, ‘ಕೈದಿಗಳು ಮತ್ತು ಸಂದರ್ಶಕರ ಭೇಟಿಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದು ಫೋಟೊಗಳನ್ನು ಗಮನಿಸಿದರೆ ವೇದ್ಯ ವಾಗುತ್ತದೆ. ಪ್ರಾಯಶಃ ರಾಜ್ಯದ ಎಲ್ಲಾ ಕಾರಾಗೃಹಗಳ ಸ್ಥಿತಿಯೂ ಇದೇ ಆಗಿರಬಹುದು’ ಎಂಬ ಅಭಿಪ್ರಾಯವ್ಯಕ್ತಪಡಿಸಿತು.</p>.<p>‘ಕಾರಾಗೃಹಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಂತ-ಹಂತವಾಗಿ ಕ್ರಮ ಕೈಗೊಳ್ಳಲು ಕಾರ್ಯ ಯೋಜನೆ ರೂಪಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಏಪ್ರಿಲ್15ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಾದ್ಯಂತ ಕಾರಾಗೃಹಗಳಲ್ಲಿ ಕೈದಿಗಳು ತಮ್ಮ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.</p>.<p>ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ, ಸರ್ಕಾರದ ಪರ ವಕೀಲ ವೈ.ಎಚ್. ವಿಜಯಕುಮಾರ್, ಕೇಂದ್ರ ಕಾರಾಗೃಹದಲ್ಲಿನ ಸಂದರ್ಶನ ವ್ಯವಸ್ಥೆಯ ಕುರಿತಂತೆ ಫೋಟೊಗಳನ್ನು ಒಳಗೊಂಡ ವರದಿಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಿದರು.</p>.<p>ವರದಿ ಪರಿಶೀಲಿಸಿದ ನ್ಯಾಯಪೀಠ, ‘ಕೈದಿಗಳು ಮತ್ತು ಸಂದರ್ಶಕರ ಭೇಟಿಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದು ಫೋಟೊಗಳನ್ನು ಗಮನಿಸಿದರೆ ವೇದ್ಯ ವಾಗುತ್ತದೆ. ಪ್ರಾಯಶಃ ರಾಜ್ಯದ ಎಲ್ಲಾ ಕಾರಾಗೃಹಗಳ ಸ್ಥಿತಿಯೂ ಇದೇ ಆಗಿರಬಹುದು’ ಎಂಬ ಅಭಿಪ್ರಾಯವ್ಯಕ್ತಪಡಿಸಿತು.</p>.<p>‘ಕಾರಾಗೃಹಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಂತ-ಹಂತವಾಗಿ ಕ್ರಮ ಕೈಗೊಳ್ಳಲು ಕಾರ್ಯ ಯೋಜನೆ ರೂಪಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಏಪ್ರಿಲ್15ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>