ಮೇಕೆದಾಟು ಕುರಿತು ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸುವಂತೆ ಸಿಡಬ್ಲ್ಯೂಸಿ ಇತ್ತೀಚೆಗೆ ಕರ್ನಾಟಕಕ್ಕೆ ಸೂಚಿಸಿತ್ತು. ಆದರೆ, ಕಾವೇರಿ ನದಿಯ ಕೆಳಹಂತದ ರಾಜ್ಯಗಳ ಅಭಿಪ್ರಾಯವನ್ನೇ ಕೇಳದಿರುವುದು ಸರಿಯಲ್ಲ ಎಂದು ತಮಿಳುನಾಡು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಪ್ರಭಾಕರನ್ ಸಭೆಯಲ್ಲಿ ದೂರಿದರು. ಒಂದೊಮ್ಮೆ ಕರ್ನಾಟಕವು ಯೋಜನೆ ಕೈಗೆತ್ತಿಕೊಂಡರೆ ತಮಿಳುನಾಡಿನ ಲಕ್ಷಾಂತರ ರೈತರ ಜಮೀನಿಗೆ ನೀರು ದೊರೆಯದಿರುವ ಆತಂಕ ಇದೆ ಎಂದು ಅವರು ಹೇಳಿದರು.