‘ಈ ಯೋಜನೆ ಆರಂಭಿಸುವುದರಿಂದ, ನದಿ ನೀರು ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಉಲ್ಲಂಘನೆಯಾ
ಗಲಿದೆ’ ಎಂದು ತಮಿಳುನಾಡು ಪರ ವಕೀಲ ಶೇಖರ್ ನಾಫಡೆ ತಿಳಿಸಿದರು. ಆಗ ಮಧ್ಯ ಪ್ರವೇಶಿಸಿದ ಕೇಂದ್ರದ ಪರ ವಕೀಲ ವಸೀಂ ಖಾದ್ರಿ, ‘ಯೋಜನೆ ಕೈಗೆತ್ತಿಕೊಳ್ಳುವ ನಿರ್ಧಾರವು ಸುಪ್ರೀಂ ಕೋರ್ಟ್ನ ತೀರ್ಪಿಗೆ ಒಳಪಡುವುದರಿಂದ ಪ್ರತಿಕ್ರಿಯೆ ನೀಡಲು ಕಾಲಾವಕಾಶ ಬೇಕು’ ಎಂದು ಕೋರಿದರು.