<p><strong>ಕನಕಪುರ: </strong>ಮೇಕೆದಾಟು ಅಣೆಕಟ್ಟೆ ನಿರ್ಮಾಣದ ವಿಚಾರದಲ್ಲಿ ಕರ್ನಾಟಕ–ತಮಿಳುನಾಡು ನಡುವೆ ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.</p>.<p>ತಾಲ್ಲೂಕಿನ ಮೇಕೆದಾಟು ಬಳಿ ಶುಕ್ರವಾರ ಉದ್ದೇಶಿತ ಅಣೆಕಟ್ಟೆ ನಿರ್ಮಾಣದ ಸ್ಥಳ ಪರಿಶೀಲನೆ ಮಾಡಿ ಅವರು ಮಾತನಾಡಿದರು. </p>.<p>‘ಯೋಜನೆ ಸಂಬಂಧ ಮಾತುಕತೆಗಾಗಿ ತಮಿಳುನಾಡು ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಬರೆದು ಮನವಿ ಮಾಡಿದ್ದೇವೆ. ಅವರು ಅನುಮತಿ ಕೊಟ್ಟರೆ ಚೆನ್ನೈಗೆ ಹೋಗಿ ಅವರಿಗೆ ವಿವರಿಸುತ್ತೇವೆ. ಅವರೇ ಇಲ್ಲಿಗೆ ನಿಯೋಗ ಕರೆದುಕೊಂಡು ಬಂದರೆ ಮಾಹಿತಿ ಹಂಚಿಕೊಳ್ಳಲು ಸಿದ್ಧರಿದ್ದೇವೆ’ ಎಂದರು.</p>.<p>‘ಕೇಂದ್ರ ಸರ್ಕಾರ ಹಾಗೂ ತಮಿಳುನಾಡಿಗೆ ಯೋಜನೆಯ ವಾಸ್ತವಾಂಶ ಹೆಚ್ಚಾಗಿ ಗೊತ್ತಿದೆ. ಆದರೆ ರಾಜಕೀಯ ಕಾರಣಗಳಿಗಾಗಿ ಇದನ್ನು ವಿರೋಧಿಸಲಾಗುತ್ತಿದೆ. ತಮಿಳುನಾಡು ಸರ್ಕಾರವು ನ್ಯಾಯಾಲಯದಲ್ಲಿ ನಮ್ಮ ವಿರುದ್ಧ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಾಪಸ್ ಪಡೆಯುವ ವಿಶ್ವಾಸ ಇದೆ’ ಎಂದರು.</p>.<p>‘ಕಾವೇರಿ ಐ–ತೀರ್ಪಿನಂತೆ ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಒಟ್ಟು 18 ಟಿಎಂಸಿಯಷ್ಟು ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಇದೆ. ಈ ಜಲಾಶಯದಿಂದ ಮಹಾನಗರಿಯ ನೀರಿನ ಬವಣೆ ನೀಗಲಿದೆ. ಕೇಂದ್ರವು ಅನುಮತಿ ನೀಡಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ನ್ಯಾಯಾಲಯದ ಹಸಿರು ಪೀಠಕ್ಕೂ ಮನವರಿಕೆ ಮಾಡಿಕೊಟ್ಟು, ಕಾಮಗಾರಿಗೆ ಯಾವುದೇ ಅಡಚಣೆ ಆಗದಂತೆ ನಿಗಾ ವಹಿಸಲಾಗುವುದು’ ಎಂದರು.</p>.<p>ಒಂಟಿಗುಂಡ್ಲು ಹಾಗೂ ಮೇಕೆದಾಟು ಪ್ರದೇಶವನ್ನು ಸಚಿವರು ವೀಕ್ಷಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಮೇಕೆದಾಟು ಅಣೆಕಟ್ಟೆ ನಿರ್ಮಾಣದ ವಿಚಾರದಲ್ಲಿ ಕರ್ನಾಟಕ–ತಮಿಳುನಾಡು ನಡುವೆ ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.</p>.<p>ತಾಲ್ಲೂಕಿನ ಮೇಕೆದಾಟು ಬಳಿ ಶುಕ್ರವಾರ ಉದ್ದೇಶಿತ ಅಣೆಕಟ್ಟೆ ನಿರ್ಮಾಣದ ಸ್ಥಳ ಪರಿಶೀಲನೆ ಮಾಡಿ ಅವರು ಮಾತನಾಡಿದರು. </p>.<p>‘ಯೋಜನೆ ಸಂಬಂಧ ಮಾತುಕತೆಗಾಗಿ ತಮಿಳುನಾಡು ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಬರೆದು ಮನವಿ ಮಾಡಿದ್ದೇವೆ. ಅವರು ಅನುಮತಿ ಕೊಟ್ಟರೆ ಚೆನ್ನೈಗೆ ಹೋಗಿ ಅವರಿಗೆ ವಿವರಿಸುತ್ತೇವೆ. ಅವರೇ ಇಲ್ಲಿಗೆ ನಿಯೋಗ ಕರೆದುಕೊಂಡು ಬಂದರೆ ಮಾಹಿತಿ ಹಂಚಿಕೊಳ್ಳಲು ಸಿದ್ಧರಿದ್ದೇವೆ’ ಎಂದರು.</p>.<p>‘ಕೇಂದ್ರ ಸರ್ಕಾರ ಹಾಗೂ ತಮಿಳುನಾಡಿಗೆ ಯೋಜನೆಯ ವಾಸ್ತವಾಂಶ ಹೆಚ್ಚಾಗಿ ಗೊತ್ತಿದೆ. ಆದರೆ ರಾಜಕೀಯ ಕಾರಣಗಳಿಗಾಗಿ ಇದನ್ನು ವಿರೋಧಿಸಲಾಗುತ್ತಿದೆ. ತಮಿಳುನಾಡು ಸರ್ಕಾರವು ನ್ಯಾಯಾಲಯದಲ್ಲಿ ನಮ್ಮ ವಿರುದ್ಧ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಾಪಸ್ ಪಡೆಯುವ ವಿಶ್ವಾಸ ಇದೆ’ ಎಂದರು.</p>.<p>‘ಕಾವೇರಿ ಐ–ತೀರ್ಪಿನಂತೆ ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಒಟ್ಟು 18 ಟಿಎಂಸಿಯಷ್ಟು ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಇದೆ. ಈ ಜಲಾಶಯದಿಂದ ಮಹಾನಗರಿಯ ನೀರಿನ ಬವಣೆ ನೀಗಲಿದೆ. ಕೇಂದ್ರವು ಅನುಮತಿ ನೀಡಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ನ್ಯಾಯಾಲಯದ ಹಸಿರು ಪೀಠಕ್ಕೂ ಮನವರಿಕೆ ಮಾಡಿಕೊಟ್ಟು, ಕಾಮಗಾರಿಗೆ ಯಾವುದೇ ಅಡಚಣೆ ಆಗದಂತೆ ನಿಗಾ ವಹಿಸಲಾಗುವುದು’ ಎಂದರು.</p>.<p>ಒಂಟಿಗುಂಡ್ಲು ಹಾಗೂ ಮೇಕೆದಾಟು ಪ್ರದೇಶವನ್ನು ಸಚಿವರು ವೀಕ್ಷಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>