ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮುತಗಾ ಕ್ಷೇತ್ರದ ಸದಸ್ಯ ಸುನೀಲ ಅಷ್ಟೇಕರ, ‘ಗಡಿ ಭಾಗದಲ್ಲಿ ಮರಾಠಿ ಹಾಗೂ ಕನ್ನಡ ಭಾಷಿಕರು ಸಹಬಾಳ್ವೆಯಿಂದ ಬದುಕುತ್ತಿದ್ದೇವೆ. ಆದರೆ, ಸವದಿ ಮತ್ತು ಭೀಮಾಶಂಕರ ವಿವಾದಾತ್ಮಕ ಹೇಳಿಕೆ ನೀಡಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ. ಇದರಿಂದ ಮರಾಠಿಗರಿಗೆ ಅವಮಾನವೂ ಆಗಿದೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕು’ ಒತ್ತಾಯಿಸಿದರು. ಇದಕ್ಕೆ ಎಂಇಎಸ್ ಬೆಂಬಲಿತ ಇತರ ಸದಸ್ಯರು ದನಿಗೂಡಿಸಿದರು.