ರಾಜ್ಯದ ಎಲ್ಲಾನಿಲ್ದಾಣಗಳಲ್ಲಿ ಹೈ ಅಲರ್ಟ್:ಈ ಘಟನೆಯಿಂದಾಗಿ ರಾಜ್ಯದ ಎಲ್ಲಾ ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಬೆಂಗಳೂರಿಗೆ ಆಗಮಿಸುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ನಗರಕ್ಕೆ ಬರುವ ಎಲ್ಲಾ ಬಸ್ಸುಗಳು, ರೈಲುಗಳನ್ನು ತೀವ್ರತಪಾಸಣೆಗೆ ಒಳಪಡಿಸಲಾಗುತ್ತಿದೆ. ಶ್ವಾನದಳ ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದು ಪ್ರತಿಯೊಂದು ವಸ್ತುವನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ.
ವಿಶೇಷ ತನಿಖಾ ತಂಡ: ರಾಜ್ಯಗುಪ್ತಚರ ಇಲಾಖೆ, ನಗರ ಪೊಲೀಸರು, ಜಿಆರ್ ಪಿ, ಆರ್ ಎಎಫ್ ಪೊಲೀಸರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿದ್ದು, ಈ ತಂಡ ತನಿಖೆ ನಡೆಸುತ್ತಿದೆ ಎಂದು ಎಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.