ಈ ದೂರನ್ನು ಲೆಕ್ಕಿಸದ ಪೊಲೀಸರು, ಕೇವಲ ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದರು. ಅದನ್ನೇ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದರ ಪರಿಶೀಲನೆ ನಡೆಸಿದ ನ್ಯಾಯಾಧೀಶರು, ‘ಒಬ್ಬ ಮಹಿಳೆ ದೂರು ನೀಡಿದ್ದು ಗಂಭೀರ ವಿಷಯ. ಕೂಡಲೇ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಿ’ ಎಂದು ಪೊಲೀಸರಿಗೆ ಸೂಚನೆ ನೀಡಿದರು. ‘ಜೀವ ಬೆದರಿಕೆ ಹಾಗೂ ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.