ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಬೆಂಗಳೂರು ಮೆಟ್ರೊ ರೈಲು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಎಲ್. ಯಶವಂತ ಚೌಹಾಣ್, 'ಮೈಸೂರು ರಸ್ತೆ ಕಡೆಯಿಂದ ಬೈಯಪ್ಪನಹಳ್ಳಿಗೆ ಸಾಗುತ್ತಿದ್ದ ಆರು ಬೋಗಿಗಳ ಮೆಟ್ರೊ ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಹಾಗಾಗಿ ರೈಲನ್ನು ಟ್ರಿನಿಟಿ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆವು. ಪರಿಶೀಲನೆ ಸಲುವಾಗಿ ಖಾಲಿ ರೈಲನ್ನು ಡಿಪೊಗೆ ಕಳುಹಿಸಬೇಕಾಯಿತು. ಈ ಪ್ರಕ್ರಿಯೆಯಿಂದಾಗಿ ಉಳಿದ ರೈಲುಗಳ ಸಂಚಾರವೂ ಸ್ವಲ್ಪ ವಿಳಂಬ ಆಗಿದೆ. ಆದರೆ, ಬೆಳಿಗ್ಗೆ 10 ಗಂಟೆ ವೇಳೆಗೆ ಸೇವೆಯು ಯಥಾಸ್ಥಿತಿಗೆ ಬಂದಿದೆ' ಎಂದು ತಿಳಿಸಿದರು.