ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಸಿಂಹರಾಜಪುರ: ಬೆಳಿಗ್ಗೆ ಮತದಾನ ಚುರುಕು

Last Updated 13 ಮೇ 2018, 11:41 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕಿನಾದ್ಯಂತ ಶನಿವಾರ ನಡೆದ ವಿಧಾನಸಭಾ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿತ್ತು.

ಬೆಳಿಗ್ಗೆ ಮತದಾನ ಆರಂಭವಾಗುತ್ತಿದ್ದಂತೆ ಮತದಾರರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಂಜೆಯವರೆಗೆ ಕಾಯದೆ ಬೇಗನೆ ಮತಚಲಾಯಿಸಿ, ಎಂದು ವಾಹನದಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಿದ್ದರಿಂದ ಮಧ್ಯಾಹ್ನದ ವೇಳೆಗೆ ಮತದಾನ ಚುರುಕುಗೊಂಡಿತ್ತು.

ಪಟ್ಟಣದ ಪ್ರವಾಸಿ ಮಂದಿರದ ಸಮೀಪದ ಪೇಟೆ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 19ರಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷವುಂಟಾಗಿ ಮತದಾನ ಮಧ್ಯದಲ್ಲಿ ಸ್ಥಗಿತಗೊಂಡಿತ್ತು. ಅರ್ಧಗಂಟೆ ನಂತರ ಬೇರೆ ಯಂತ್ರ ಅಳವಡಿಸಿ ಮತದಾನ ಆರಂಭಿಸಲಾಯಿತು. ತಾಲ್ಲೂಕಿನ ಬಡಬಗಬೈಲು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಮತಚಲಾಯಿಸಿದರು.

ಪಟ್ಟಣದ ಮತಗಟ್ಟೆ ಸಂಖ್ಯೆ 21ರಲ್ಲಿ ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮೀಸೇನಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮತಚಲಾಯಿಸಿದರು. ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನತಾ ಕಾಲೋನಿ ನಿವಾಸಿ ಶತಾಯುಷಿ ರಂಗಮ್ಮ ಮಗನ ಸಹಾಯದಿಂದ ಮತಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT