ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಹೊಡೆದಾಟಕ್ಕೆ ಬಿಜೆಪಿಯವರೇ ಕಾರಣ: ಸಚಿವ ಜಿ.ಟಿ.ದೇವೇಗೌಡ ಆಕ್ರೋಶ

Last Updated 25 ಜನವರಿ 2019, 6:20 IST
ಅಕ್ಷರ ಗಾತ್ರ

ಚಾಮರಾಜನಗರ: ‘ಈಗಲ್ಟನ್‌ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಳ್ಳಲು ಬಿಜೆಪಿಯವರೇ ಕಾರಣ. ಅವರು ಆಪರೇಷನ್ ಕಮಲಕ್ಕೆ‌ ಹೊರಟಿದ್ದರಿಂದ ಗಲಾಟೆ ಆಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯ ಬಿಜೆಪಿ ಮುಖಂಡರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಅದರ ನಾಯಕರು ಶಾಸಕರನ್ನು ಭೇಟಿ ಮಾಡಿ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ’ಎಂದು ಆರೋಪಿಸಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೈತ್ರಿ ಸರ್ಕಾರ ಬಂದ‌ ಮೇಲೆ ಕೆಲಸ ಮಾಡಲು ಒಂದು ವರ್ಷ ಆದರೂ ಅವಕಾಶ ನೀಡಬೇಕು. ಸರ್ಕಾರ ಎಡವಿದಾಗ ಮತ್ತು ಬಿದ್ದಾಗ ಏನು ಬೇಕಾದರೂ ಮಾಡಲಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT