ಚಾಮರಾಜನಗರ: ‘ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಳ್ಳಲು ಬಿಜೆಪಿಯವರೇ ಕಾರಣ. ಅವರು ಆಪರೇಷನ್ ಕಮಲಕ್ಕೆ ಹೊರಟಿದ್ದರಿಂದ ಗಲಾಟೆ ಆಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯ ಬಿಜೆಪಿ ಮುಖಂಡರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಅದರ ನಾಯಕರು ಶಾಸಕರನ್ನು ಭೇಟಿ ಮಾಡಿ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ’ಎಂದು ಆರೋಪಿಸಿದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೈತ್ರಿ ಸರ್ಕಾರ ಬಂದ ಮೇಲೆ ಕೆಲಸ ಮಾಡಲು ಒಂದು ವರ್ಷ ಆದರೂ ಅವಕಾಶ ನೀಡಬೇಕು. ಸರ್ಕಾರ ಎಡವಿದಾಗ ಮತ್ತು ಬಿದ್ದಾಗ ಏನು ಬೇಕಾದರೂ ಮಾಡಲಿ’ ಎಂದು ಹೇಳಿದರು.