ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಅವರ ಬಗ್ಗೆ ಸಭೆಯಲ್ಲಿ ಅಪಸ್ವರ ಕೇಳಿ ಬಂದಿದೆ. ಆಡಳಿತದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದು ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿತ್ತು.ಸಭೆಯಲ್ಲಿ ಶಾಸಕರಾದ ಉಮೇಶ ಕತ್ತಿ, ಬಸನಗೌಡ ಪಾಟೀಲ ಯತ್ನಾಳ, ಮುರುಗೇಶ ನಿರಾಣಿ, ಶಿವನಗೌಡ ನಾಯಕ್, ರಾಜೂಗೌಡ, ಶಂಕರ ಮುನೇನಕೊಪ್ಪ, ಎ.ಎಸ್.ಪಾಟೀಲ ನಡಹಳ್ಳಿ, ರುದ್ರಪ್ಪ ಲಮಾಣಿ ಮತ್ತು ಇತರರು ಇದ್ದರು ಎನ್ನಲಾಗಿದೆ. ಕ್ರೆಸೆಂಟ್ ರಸ್ತೆಯಲ್ಲಿರುವ ಮನೆಯಲ್ಲಿ ಭೋಜನ ಕೂಟದ ನೆಪದಲ್ಲಿ ಸಭೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.