ಬೆಂಗಳೂರು: ‘ಇದೇ 10ರಂದು ಟಿಪ್ಪು ಜಯಂತಿ ಆಚರಿಸಲಾಗುವುದು. ಬಿಜೆಪಿ ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಅದರಿಂದ ಉಂಟಾಗುವ ಅನಾಹುತಗಳಿಗೆ ಅವರೇ ಹೊಣೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರೂ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.
‘ಪ್ರತಿ ವರ್ಷದಂತೆ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸುವುದು ನಮ್ಮ ಕರ್ತವ್ಯ. ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ನಿರ್ಧಾರ ತಿಳಿಸಿದ್ದಾರೆ. ಸರ್ಕಾರದ ನಿಯಮ ಹಾಗೂ ರೂಪುರೇಷೆಗಳ ಪ್ರಕಾರವೇ ಕಾರ್ಯಕ್ರಮ ನಡೆಯಲಿದೆ’ ಎಂದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಟಿಪ್ಪು ಜಯಂತಿ ಆಚರಣೆ ಸಂಬಂಧ ಯಾವುದೇ ಸಭೆ ನಡೆಸಿಲ್ಲ’ ಎಂದು ಜಯಮಾಲಾ ಹೇಳಿದರು.