ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿ, ‘ಎಲ್ಲರೂ ಸಚಿವ ಸ್ಥಾನ ಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಇದರಿಂದ ನಮ್ಮ ನಾಯಕರಿಗೆ ಸಮಸ್ಯೆಯಾಗಿದೆ. ಆದರೆ, ತುಲಾನಾತ್ಮಕವಾಗಿ ಆಲೋಚನೆ ಮಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಎಲ್ಲ ಸಮುದಾಯಕ್ಕೂ ಆದ್ಯತೆ ನೀಡಿದಂತಾಗುತ್ತದೆ. ಮುಖ್ಯಮಂತ್ರಿ ಅವರು ನನಗೂ ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.