ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ, ‘ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿ ನೀಡುವುದನ್ನು ನಿಲ್ಲಿಸಿತು. ಹೀಗಾಗಿ ಮಠಕ್ಕೆ ನೀಡುವುದರಲ್ಲಿ ವ್ಯತ್ಯಯವಾಗಿದೆ. ನವೆಂಬರ್ನಲ್ಲಿಯೇ ಈ ಸಂಬಂಧ ಸ್ವಾಮೀಜಿ ಹಾಗೂ ಸಂಘ ಸಂಸ್ಥೆಗಳವರು ನನಗೆ ಪತ್ರ ಬರೆದಿದ್ದರು. ಮುಖ್ಯ ಕಾರ್ಯದರ್ಶಿ ಅವರ ಜತೆ ಈ ಸಂಬಂಧ ಮಾತುಕತೆ ನಡೆಸಿ ಕ್ರಮವಹಿಸಲು ಮುಂದಾಗಿದ್ದೆ. ಅಷ್ಟರಲ್ಲಿ ಸಹೋದರ ಯು.ಟಿ.ಖಾದರ್ ಈ ಬಗ್ಗೆ ಮಾತನಾಡಿದರು’ ಎಂದು ತಿಳಿಸಿದರು.