ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಳ್ಳಿ ನಿಧನಕ್ಕೆ ಗಣ್ಯರ ಕಂಬನಿ

Last Updated 22 ಮಾರ್ಚ್ 2019, 10:48 IST
ಅಕ್ಷರ ಗಾತ್ರ

ಬೆಂಗಳೂರು: ಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ ನಿಧನಕ್ಕೆ ಹಲವು ಗಣ್ಯರುಕಂಬನಿ ಮಿಡಿದಿದ್ದಾರೆ.

ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮ್ಯ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.ಸುದೀರ್ಘ ಕಾಲದ ನನ್ನ ಸ್ನೇಹಿತರಾದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಶಿವಳ್ಳಿ ಅವರು ಮೆಲುಮಾತಿನ,ಸರಳ ವ್ಯಕ್ತಿತ್ವದ, ಜನಾನುರಾಗಿ ನಾಯಕರಾಗಿದ್ದರು. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ‌ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರ ನಿಧನ ನನಗೆ ತೀವ್ರ ಆಘಾತವನ್ನು ತಂದಿದೆ. ಧಾರವಾಡದ ಕಟ್ಟಡ ದುರಂತ ಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಉಪಸ್ಥಿತರಿದ್ದು ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದ ಶಿವಳ್ಳಿ ಅವರು ಇನ್ನಿಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ.ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಶಿವಳ್ಳಿ ಜನಾನುರಾಗಿಗಳಾಗಿದ್ದರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಪೌರಾಡಳಿತ ಸಚಿವ ಸಿ ಎಸ್ ಶಿವಳ್ಳಿಯವರ ನಿಧನ ನನಗೆ ಅತೀವ ಆಘಾತವನ್ನುಂಟು ಮಾಡಿದೆ‌. ಹುಷಾರಿದ್ದ ಕೊನೆ ಕ್ಷಣದವರೆಗೂ ಧಾರವಾಡ ಕಟ್ಟಡ ಕುಸಿತದ ತೆರವು ಪ್ರಕ್ರಿಯೆಯ ಉಸ್ತುವಾರಿ ವಹಿಸಿದ್ದರು. ರಾಜ್ಯ ಹಾಗೂ ಪಕ್ಷ ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದೆ. ಭಗವಂತ ಶಿವಳ್ಳಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT