ಅಡಗೂರು ಎಚ್.ವಿಶ್ವನಾಥ್ ಒಬ್ಬರೇ ಅಲ್ಲ. ಎಂ.ಟಿ.ಬಿ ನಾಗರಾಜ್, ಶಂಕರ್, ರೋಷನ್ಬೇಗ್ ಸೇರಿದಂತೆ ಹಲವರು ವಿಧಾನಪರಿಷತ್ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಇವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ ಎಂಬುದು ನಮ್ಮ ಒತ್ತಾಯವೂ ಆಗಿದೆ. ಬಿ.ಎಸ್.ಯಡಿಯೂರಪ್ಪ ಮಾತಿಗೆ ತಪ್ಪುವುದಿಲ್ಲ. ಆದರೆ, ಅವರಿಗೂ ಹೈಕಮಾಂಡ್ ಇದೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.