<p><strong>ಮೈಸೂರು</strong>: ‘ಮುಖ್ಯಶಿಕ್ಷಕರ ಮೇಲೆ ನಂಬಿಕೆ ಇಟ್ಟಿದ್ದೆವು. ಆದರೆ, ಅವರು ಆ ನಂಬಿಕೆ ಉಳಿಸಿಕೊಳ್ಳಲಿಲ್ಲ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಮಂಗಳವಾರ ಇಲ್ಲಿ ಬೇಸರ ವ್ಯಕ್ತಪಡಿಸಿದರು.</p>.<p>ನಂಜನಗೂಡಿನ ಕಾರ್ಮೆಲ್ ಕಾನ್ವೆಂಟ್ನಲ್ಲಿ ನಡೆದ ‘ವಿದ್ಯಾರ್ಥಿಗ ಳೊಂದಿಗೆ ಸಂವಾದ’ದಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಬಹಿರಂಗ ಗೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪೂರ್ವಸಿದ್ಧತಾ ಪರೀಕ್ಷೆಯಂತೆಯೇ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆಯೂ ಬಹಿರಂಗಗೊಂಡರೆ, ಕಷ್ಟಪಟ್ಟು ಅಭ್ಯಾಸ ಮಾಡಿದ ವಿದ್ಯಾರ್ಥಿಗಳ ಪಾಡೇನು?’ ಎಂದು ವಿದ್ಯಾರ್ಥಿನಿ ಗಗನಾ ಆತಂಕ ತೋಡಿ ಕೊಂಡಾಗ, ಸಚಿವರು ಮೇಲಿನಂತೆ<br />ಪ್ರತಿಕ್ರಿಯಿಸಿದರು. ‘ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಮುಖ್ಯ ಶಿಕ್ಷಕರಿಗೆ 3 ದಿನ ಮೊದಲೇ ನೀಡಲಾಗಿತ್ತು. ಕೆಲವರು ಅದನ್ನು ‘ವಾಟ್ಸ್ಆ್ಯಪ್’ನಲ್ಲಿ, ‘ಹೆಲೊ ಆ್ಯಪ್’ನಲ್ಲಿ ಹಾಕಿದರು. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದು ನಮಗೆ ಬಿಟ್ಟ ವಿಚಾರ. ವಿದ್ಯಾರ್ಥಿಗಳು ಓದಿನಲ್ಲಿ ಮಗ್ನರಾಗಬೇಕು’ ಎಂದರು.</p>.<p>ದೆಹಲಿ ಮಾದರಿಯಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳನ್ನು ರೂಪಿಸುವುದು ಸುಲಭವಲ್ಲ. ಅಲ್ಲಿ ಕೇವಲ 449 ಸರ್ಕಾರಿ ಶಾಲೆಗಳಿದ್ದರೆ, ನಮ್ಮ ರಾಜ್ಯದಲ್ಲಿ ಅವುಗಳ ಸಂಖ್ಯೆ 53 ಸಾವಿರ. ದೆಹಲಿ ಶಾಲೆಗಳಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತೇವೆ<br /><strong>ಎಸ್. ಸುರೇಶ್ಕುಮಾರ್</strong><br /><strong>ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮುಖ್ಯಶಿಕ್ಷಕರ ಮೇಲೆ ನಂಬಿಕೆ ಇಟ್ಟಿದ್ದೆವು. ಆದರೆ, ಅವರು ಆ ನಂಬಿಕೆ ಉಳಿಸಿಕೊಳ್ಳಲಿಲ್ಲ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಮಂಗಳವಾರ ಇಲ್ಲಿ ಬೇಸರ ವ್ಯಕ್ತಪಡಿಸಿದರು.</p>.<p>ನಂಜನಗೂಡಿನ ಕಾರ್ಮೆಲ್ ಕಾನ್ವೆಂಟ್ನಲ್ಲಿ ನಡೆದ ‘ವಿದ್ಯಾರ್ಥಿಗ ಳೊಂದಿಗೆ ಸಂವಾದ’ದಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಬಹಿರಂಗ ಗೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪೂರ್ವಸಿದ್ಧತಾ ಪರೀಕ್ಷೆಯಂತೆಯೇ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆಯೂ ಬಹಿರಂಗಗೊಂಡರೆ, ಕಷ್ಟಪಟ್ಟು ಅಭ್ಯಾಸ ಮಾಡಿದ ವಿದ್ಯಾರ್ಥಿಗಳ ಪಾಡೇನು?’ ಎಂದು ವಿದ್ಯಾರ್ಥಿನಿ ಗಗನಾ ಆತಂಕ ತೋಡಿ ಕೊಂಡಾಗ, ಸಚಿವರು ಮೇಲಿನಂತೆ<br />ಪ್ರತಿಕ್ರಿಯಿಸಿದರು. ‘ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಮುಖ್ಯ ಶಿಕ್ಷಕರಿಗೆ 3 ದಿನ ಮೊದಲೇ ನೀಡಲಾಗಿತ್ತು. ಕೆಲವರು ಅದನ್ನು ‘ವಾಟ್ಸ್ಆ್ಯಪ್’ನಲ್ಲಿ, ‘ಹೆಲೊ ಆ್ಯಪ್’ನಲ್ಲಿ ಹಾಕಿದರು. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದು ನಮಗೆ ಬಿಟ್ಟ ವಿಚಾರ. ವಿದ್ಯಾರ್ಥಿಗಳು ಓದಿನಲ್ಲಿ ಮಗ್ನರಾಗಬೇಕು’ ಎಂದರು.</p>.<p>ದೆಹಲಿ ಮಾದರಿಯಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳನ್ನು ರೂಪಿಸುವುದು ಸುಲಭವಲ್ಲ. ಅಲ್ಲಿ ಕೇವಲ 449 ಸರ್ಕಾರಿ ಶಾಲೆಗಳಿದ್ದರೆ, ನಮ್ಮ ರಾಜ್ಯದಲ್ಲಿ ಅವುಗಳ ಸಂಖ್ಯೆ 53 ಸಾವಿರ. ದೆಹಲಿ ಶಾಲೆಗಳಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತೇವೆ<br /><strong>ಎಸ್. ಸುರೇಶ್ಕುಮಾರ್</strong><br /><strong>ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>