ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜರಾಜೇಶ್ವರಿ‌ ದೇವಿಗೆ ವಿಶೇಷ ಪೂಜೆ: ಹರಕೆ ತೀರಿಸಿದ ಸಚಿವ ಸುರೇಶಕುಮಾರ್

Last Updated 10 ಜುಲೈ 2020, 9:33 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಪೂರ್ಣವಾಗಿದ್ದರಿಂದ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಶುಕ್ರವಾರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದರು.

ಕಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಕೌಶಿಕ್‌‌‌ ನನ್ನು ಭೇಟಿ ಮಾಡಿ ಮಾತನಾಡಿದ ಸುರೇಶಕುಮಾರ್, ‘ಆತನ ಪಠ್ಯೇತರ ಚಟುವಟಿಕೆಗಳ ಬಗ್ಗೆ ವಿಚಾರಿಸಿದರು. ಸಾಮಾಜಿಕ ಜಾಲತಾಣದಲ್ಲಿ ನಿನ್ನ ಸಾಧನೆಯ ಬಗ್ಗೆ ಬರೆದುಕೊಂಡಿದ್ದೆ’ ಎಂದು ತಿಳಿಸಿದರು. ಬಳಿಕ ಶಿಕ್ಷಣ ಸಚಿವರು ಆಪ್ತ ಸಹಾಯಕನನ್ನು ಕರೆದು ಫೋಟೊ ತೆಗೆಸಿಕೊಂಡರು.

ಸಚಿವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ದಾರಿ ನಡುವೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ್ದು, ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಕಲ್ಲಡ್ಕ ಪ್ರಭಾಕರ್‌‌‌‌ ಭಟ್‌ ಅವರೊಂದಿಗೆ ಮಾತುಕತೆ ನಡೆಸಿದರು. ಈ ಬಾರಿ ಕೊರೊನಾದಿಂದಾಗಿ ಶಿಕ್ಷಣಕ್ಕೆ ಅಡ್ಡಿಯಾಗಿದ್ದು, ಈ ವಿಚಾರವಾಗಿ ಶೈಕ್ಷಣಿಕ ಚಟುವಟಿಕೆಯ ಬಗ್ಗೆ ಮಾಹಿತಿ ಹಾಗೂ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT