ಈ ಮನವಿಯನ್ನು ಪುರಸ್ಕರಿಸಿದ ಸಚಿವ ಸುರೇಶ್ ಕುಮಾರ್ ಅವರು, ಇತಿಹಾಸಪುಸ್ತಕದ ಟಿಪ್ಪು ಸುಲ್ತಾನ್ ವಿಷಯದಕುರಿತು ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆಯನ್ನು ಕರೆದು ಆ ಸಭೆಗೆ ಶಾಸಕರಾದ ಶ್ರೀ ಅಪ್ಪಚ್ಚು ರಂಜನ್ ಅವರನ್ನೂ ಆಹ್ವಾನಿಸಬೇಕು. ಅಲ್ಲದೆಈ ಪಠ್ಯದ ಅಗತ್ಯತೆ ಹಾಗೂ ಅದನ್ನು ಉಳಿಸಿಕೊಳ್ಳುವ ಇಲ್ಲವೇ ತೆಗೆದುಹಾಕುವ ಕುರಿತು ಸಾಧಕ ಬಾಧಕಗಳ ಕುರಿತಂತೆ ಮೂರು ದಿನಗಳಲ್ಲಿ ವರದಿ ಸಲ್ಲಿಸಲು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.