ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಿ ಬೊಗಳಿದರೆ ಏನಾಗುತ್ತದೆ: ಬಿಜೆಪಿ ವಿರುದ್ಧ ಸಚಿವ ವೆಂಕಟರಮಣಪ್ಪ ವಾಗ್ದಾಳಿ

Last Updated 4 ಮಾರ್ಚ್ 2019, 12:44 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಿಜೆಪಿಯವರಿಗೆ ಬೇರೆ ಕೆಲಸವೇ ಇಲ್ಲ. ಕಾಂಗ್ರೆಸ್‌, ಜೆಡಿಎಸ್‌ ಬಿಟ್ಟು ಹತ್ತಾರು ಶಾಸಕರು ಬರುತ್ತಾರೆ ಎಂದು ಹೇಳುತ್ತಲೇ ಇದ್ದಾರೆ. ಬೊಗೊಳೊ ನಾಯಿ ಬೊಗಳಿದರೆ ಏನುಗುತ್ತದೆ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ವ್ಯಂಗ್ಯವಾಡಿದರು.

ಉಮೇಶ್‌ ಜಾದವ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಶಾಸಕರೊಬ್ಬರು ರಾಜೀನಾಮೆ ನೀಡುವುದರಿಂದ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಆಗುವುದಿಲ್ಲ. ಬಿ.ಎಸ್‌.ಯಡಿಯೂರಪ್ಪ ಅವರ ಕನಸು ನನಸಾಗುವುದಿಲ್ಲ. ಅಂದುಕೊಂಡಂತೆ ನಡೆಯುವಂತಿದ್ದರೆ ಯಡಿಯೂರಪ್ಪ ಯಾವತ್ತೋ ಮುಖ್ಯಮಂತ್ರಿ ಆಗಿರುತ್ತಿದ್ದರು. ಮೂರು ವರ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಿರಲಿಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ಒಂದು ತಾಯಿ ಮಕ್ಕಳೇ ಕಿತ್ತಾಡುತ್ತಾರೆ. ಗಂಡ–ಹೆಂಡತಿ ನಡುವೆಯೇ ಗಲಾಟೆ ನಡೆಯುತ್ತದೆ. ಕಂಪ್ಲಿ ಶಾಸಕ ಗಣೇಶ್‌ ಹಾಗೂ ವಿಜಯನಗರ ಶಾಸಕ ಆನಂದಸಿಂಗ್ ನಡುವೆ ಗಲಾಟೆ ನಡೆದಿದ್ದರಲ್ಲಿ ವಿಶೇಷವೇನೂ ಇಲ್ಲ. ಅವರಿಬ್ಬರೂ ಸ್ನೇಹಿತರು. ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ. ಇದು ನಮ್ಮ ಸಂಸಾರ, ನಾವೇ ಸರಿಮಾಡಿಕೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT