ಬಯಸಿದ್ದು ಸಿಗದು: ಇತ್ತೀಚೆಗೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ವಲಸಿಗರು, ಬಿಜೆಪಿ ಸೇರುವ ಮುನ್ನ ಇಂತಹದೇ ಖಾತೆ ಬೇಕು ಎಂದು ಬೇಡಿಕೆ ಮಂಡಿಸಿದ್ದರು. ಮೈತ್ರಿ ಸರ್ಕಾರ ಬೀಳಿಸುವ ಹೊತ್ತಿನಲ್ಲಿ, ನಿರ್ದಿಷ್ಟ ಖಾತೆಯನ್ನೇ ನೀಡುವುದಾಗಿ ಬಿಜೆಪಿ ವರಿಷ್ಠರು ಭರವಸೆ ಕೊಟ್ಟಿದ್ದರು ಎಂದು ವಲಸಿಗರು ಹೇಳಿಕೊಂಡಿದ್ದರು. ಅಪೇಕ್ಷೆ ಪಟ್ಟಿರುವ ಖಾತೆ ಕೊಡಲಾಗದು ಎಂದು ಯಡಿಯೂರಪ್ಪ ಹೇಳಿರುವುದರಿಂದಾಗಿ, ಸಚಿವರು ಕೊಟ್ಟ ಖಾತೆ
ಯನ್ನು ವಹಿಸಿಕೊಳ್ಳಬೇಕಾದ ಸ್ಥಿತಿ ಎದುರಾಗಿದೆ. ರಮೇಶ ಜಾರಕಿಹೊಳಿ ಜಲಸಂಪನ್ಮೂಲ, ಎಸ್.ಟಿ.ಸೋಮಶೇಖರ್ ಬೆಂಗಳೂರು ಅಭಿವೃದ್ಧಿ, ಬೈರತಿ ಬಸವರಾಜ್ ನಗರಾಭಿವೃದ್ಧಿ, ಬಿ.ಸಿ. ಪಾಟೀಲ ಗೃಹ ಖಾತೆ ಮೇಲೆ ಕಣ್ಣಿಟ್ಟಿದ್ದರು.