ಒಂದು ಬಿಸಿಜಿ, ಮೂರು ಪೆಂಟಾವಲೆಂಟ್, ಮೂರು ಪೋಲಿಯೊ, ಒಂದು ರುಬೆಲ್ಲಾ (ಎಂ.ಆರ್) ಚುಚ್ಚುಮದ್ದುಗಳನ್ನು ಎರಡು ವರ್ಷದೊಳಗಿನ ಮಕ್ಕಳಿಗೆ ಕೊಡುವುದು ಕಡ್ಡಾಯ. ಆದರೆ ಇವುಗಳಿಂದ ವಂಚಿತರಾದ ಮಕ್ಕಳನ್ನು ಗುರುತಿಸಿ ಅವರಿಗೆ ಚುಚ್ಚುಮದ್ದು ನೀಡಬೇಕು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ, ಮಿಷನ್ ಇಂದ್ರ ಧನುಷ್ ಯೋಜನೆಯನ್ನು ಆರಂಭಿಸಿತು. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಮೊದಲು ಈ ಯೋಜನೆ ಆರಂಭವಾಯಿತು. ನಂತರ ಇತರ ಜಿಲ್ಲೆಗಳ ಮಕ್ಕಳನ್ನೂ ಗುರುತಿಸಿ ಚುಚ್ಚುಮದ್ದು ಕೊಡಲಾಗಿದೆ.