ಬಿಎಸ್ಎನ್ಎಲ್ ಕಚೇರಿ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಎದುರು ಸಿಐಟಿಯು, ಜೆಸಿಟಿಯು, ಐಎಐಟಿಯುಸಿ, ಟಿಯುಸಿಸಿ, ಬಿಎಸ್ಎನ್ಎಲ್ ನೌಕರರ ಸಂಘ, ಎಪಿಎಂಸಿ ಹಮಾಲರ ಸಂಘ, ಅಂಚೆ ನೌಕರರ ಸಂಘ, ಕಟ್ಟಡ ಕಾರ್ಮಿಕರ ಸಂಘ, ಬಿಸಿಯೂಟ ನೌಕರರ ಸಂಘ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಜಮಾಯಿಸಿದರು. ಅಲ್ಲಿಂದ ಚನ್ನಮ್ಮ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.